/* Change button hover color to red */
button:hover,
.wp-block-button__link:hover,
input[type="submit"]:hover {
    background-color: red !important;
    color: #fff !important; /* Makes text white for contrast */
}

  • Home
  • ಜಿಲ್ಲೆ
  • ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನಿರ್ದೇಶಕರ ಅಯ್ಕೆ
Image

ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನಿರ್ದೇಶಕರ ಅಯ್ಕೆ

ಕೊಳ್ಳೇಗಾಲ. ಸತ್ತೇಗಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಕ್ಕೆ ಭಾನುವಾರ ಚುನಾವಣೆ ನಡೆಯಿತು.

ಗ್ರಾಮದಲ್ಲಿ ನಡೆದ ಚುನಾವಣೆಯಲ್ಲಿ 8 ಮಂದಿ ನಿರ್ದೇಶಕರು ಅಮೋಘವಾಗಿ ಜಯಗಳಿಸಿದ್ದಾರೆ. ಅವಿರೋಧವಾಗಿ 3 ನಿರ್ದೇಶಕರು ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ನಾಗೇಶ್ ಅವರು ಘೋಷಣೆ ಮಾಡಿದರು.
ಈ ಪೈಕಿ ಇಂದು ನಡೆದ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದವರ ಪೈಕಿ ಸಾಲಗಾರರ ಕ್ಷೇತ್ರದ ಸಾಮಾನ್ಯ ಸ್ಥಾನದಲ್ಲಿ ಆರ್.ನವೀನ್ ಕುಮಾರ್ (128), ಭಾಸ್ಕರ (122), ಎಂ.ಮಲ್ಲೇಶ (116), ಮಲ್ಲಿಕಾರ್ಜುನ (114), ಎಂ.ಶಂಕರೇಗೌಡ (114) ಜಯಗಳಿಸಿದ್ದಾರೆ.
ಇವರ ವಿರುದ್ಧ ಸ್ಪರ್ಧಿಸಿದ್ದ ಪಿ.ಲೋಕೇಶ್ (109)
ಶಿವಕುಮಾರ್(114) ಮತಗಳನ್ನು ಪಡೆದು ಸೋಲು ಅನುಭವಿಸಿದ್ದರು.

ಮಹಿಳಾ ಮೀಸಲು ಸ್ಥಾನದಿಂದ ದೊಡ್ಡಮ್ಮ(118), ಮಂಜುಳ.ಎಸ್(102) ಗೆಲುವು ಸಾಧಿಸಿದ್ದಾರೆ.
ಇವರ ವಿರುದ್ಧ ಸ್ಪರ್ಧಿಸಿದ್ದ ಸರೋಜಮ್ಮ (67) ಮತ ಪಡೆದು ಸೋಲು ಅನುಭವಿಸಿದ್ದರು.

ಸಾಲಗಾರರಲ್ಲದ ಕ್ಷೇತ್ರದಿಂದ ಸೋಮಶೇಖರ್.ಜಿ (208) ಮತ ಪಡೆದು ಜಯಗಳಿಸಿದರು. ಇವರ ವಿರುದ್ಧ ಸ್ಪರ್ಧಿ ಗಳಾದ ಜಯರಾಜು(161) ಹಾಗೂ ಪ್ರಕಾಶ(5) ಮತಗಳನ್ನು ಪಡೆಯುವ ಮೂಲಕ ಸೋಲು ಅನುಭವಿಸಿದರು.

ಪರಿಶಿಷ್ಟ ಜಾತಿ ಮೀಸಲು ಸ್ಥಾನದಿಂದ ಸ್ಪರ್ಧಿಸಿದ್ದ ಜಿ.ಶಾಂತರಾಜು(115) ಗೆಲವು ಗಳಿಸಿದ್ದಾರೆ. ಇವರ ವಿರುದ್ಧ ಸ್ಪರ್ಧಿ ಮಹದೇವಯ್ಯ (114) ಮತಗಳ ಪಡೆದು ಸೋಲು ಅನುಭವಿಸಿದರು.

ಬಿಸಿಎಂ ‘ಎ’ ಕ್ಷೇತ್ರದಿಂದ ಕಾಂತು, ಬಿಸಿಎಂ ‘ಬಿ’ ಕ್ಷೇತ್ರದಿಂದ ರಾಜುಗೋಪಾಲ್ ಹಾಗೂ ಪರಿಶಿಷ್ಟ ಪಂಗಡ ಕ್ಷೇತ್ರದಿಂದ ಚಲುವನಾಯಕ ಅವಿರೋಧವಾಗಿ ಆಯ್ಕೆಯಾದವರು.
ಲಾಟರಿ ಮೂಲಕ ಇಬ್ಬರ ಗೆಲುವು: ಸಾಲಗಾರರ ಕ್ಷೇತ್ರದ ಸಾಮಾನ್ಯ ಸ್ಥಾನದಲ್ಲಿ ಸ್ಪರ್ಧಿಸಿದ್ದ ಮಲ್ಲಿಕಾರ್ಜುನ, ಎಂ.ಶಂಕರೇಗೌಡ ಹಾಗೂ ಶಿವಕುಮಾರ್ ಮೂವರಿಗೆ 114 ಮತಗಳು ಬಂದಿದ್ದವು. ಅದರಲ್ಲಿ ಇಬ್ಬರಿಗೆ ಮಾತ್ರ ಗೆಲುವಿಗೆ ಅವಕಾಶ ಇದ್ದುದರಿಂದ ಲಾಟರಿ ಮೂಲಕ ಮಲ್ಲಿಕಾರ್ಜುನ ಹಾಗೂ ಶಂಕರೇಗೌಡ ರವರು ಗೆಲುವು ಸಾಧಿಸಿದ್ದಾರೆ.

ಈ ವೇಳೆ ಸ್ಪರ್ಧೆ ಮಾಡಿ ಜಯಗಳಿಸಿದ್ದ ಎಲ್ಲಾ ನೂತನ ನಿರ್ದೇಶಕರುಗಳಿಗೆ ಹಾರ ಹಾಕಿ ಸನ್ಮಾನಿಸಿ, ಪ್ರಮಾಣ ಪತ್ರವನ್ನು ಚುನಾವಣಾಧಿಕಾರಿ ನಾಗೇಶ್ ನೀಡಿದರು. ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಂಗಾಂಬಿಕಾ ಹಾಗೂ ಗ್ರಾಮದ ಮುಖಂಡರು ಇದ್ದರು.

ವರದಿ: ನಿಂಪು ಸುರೇಶ್

Releated Posts

ಕೊಳ್ಳೇಗಾಲ ಭೀಮನಗರದ ಮೈಸೂರಿನಲ್ಲಿ ಇರುವ ಗುಪ್ತಚರ ಎಎಸ್ಐ ಶಿವಕುಮಾರ್ ಗೆ ಮುಖ್ಯಮಂತ್ರಿ ಗಳ ಚಿನ್ನದ ಪದಕ

ಕೊಳ್ಳೇಗಾಲ/ ಮೈಸೂರು : ಕೊಳ್ಳೇಗಾಲ ಪಟ್ಟಣದ ಭೀಮನಗರದ ನಿವಾಸಿ ಹಾಲಿ ಮೈಸೂರಿನಲ್ಲಿ ಪೋಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಎಸ್.ಶಿವಕುಮಾರ್ ಅವರು ಮುಖ್ಯಮಂತ್ರಿ ಗಳ ಪದಕ…

ByByN Rajesh Apr 3, 2026

ಕೊಳ್ಳೇಗಾಲ : ಮಹಿಳಾ ಸಬಲೀಕರಣದಿಂದ ಕುಟುಂಬದ ಅಭಿವೃದ್ಧಿ – ಶಾಸಕ ಎ.ಆರ್. ಕೃಷ್ಣಮೂರ್ತಿ

ಕೊಳ್ಳೇಗಾಲ. ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಇಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಯೋಜಿಸಿದ್ದರು. ಪಟ್ಟಣದ ವೆಂಕಟೇಶ್ವರ ಮಹಲ್ ನಲ್ಲಿ ಇಂದು…

ByByN Rajesh Apr 1, 2026

ನಿವೃತ್ತಿಯಾದ ಸೆಸ್ಕಾಂ ಎಇಇ ಎಂ ರಾಜು ಅವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

ನಿವೃತ್ತಿಯಾದ ಸೆಸ್ಕ್ ಎಇಇ ಎಂ.ರಾಜುಗೆ ಹೃದಯ ಸ್ಪರ್ಶಿ ಬೀಳ್ಕೊಡುಗೆ ಕೊಳ್ಳೇಗಾಲ : ಸೇವೆಯಿಂದ ನಿವೃತ್ತಿ ಹೊಂದಿದ ಕೊಳ್ಳೇಗಾಲ ಸೆಸ್ಕಾಂ ಉಪವಿಭಾಗದ ಎಇಇ ಎಂ.ರಾಜು ಅವರಿಗೆ…

ByByN Rajesh Mar 31, 2026

Leave a Reply

Your email address will not be published. Required fields are marked *

Scroll to Top