/* Change button hover color to red */
button:hover,
.wp-block-button__link:hover,
input[type="submit"]:hover {
    background-color: red !important;
    color: #fff !important; /* Makes text white for contrast */
}

  • Home
  • ಜಿಲ್ಲೆ
  • ಹನೂರು ಕ್ಷೇತ್ರದ ನೀರಾವರಿ ಯೋಜನೆಗಳನ್ನು ಸಂಸದ ಸುನೀಲ್ ಬೋಸ್ ಅನುಷ್ಠಾನಕ್ಕೆ ತರುತ್ತಾರೆ : ಕೆಪಿಸಿಸಿ ಜಿಲ್ಲಾ ವಕ್ತಾರ ಎಸ್.ಶಿವಕುಮಾರ್ ಮಧುವನಹಳ್ಳಿ
Image

ಹನೂರು ಕ್ಷೇತ್ರದ ನೀರಾವರಿ ಯೋಜನೆಗಳನ್ನು ಸಂಸದ ಸುನೀಲ್ ಬೋಸ್ ಅನುಷ್ಠಾನಕ್ಕೆ ತರುತ್ತಾರೆ : ಕೆಪಿಸಿಸಿ ಜಿಲ್ಲಾ ವಕ್ತಾರ ಎಸ್.ಶಿವಕುಮಾರ್ ಮಧುವನಹಳ್ಳಿ

ಹನೂರು : ಹನೂರು ವಿಧಾನಸಭಾ ಕ್ಷೇತ್ರ ಭೌಗೋಳಿಕವಾಗಿ ಬಹಳ ವಿಸ್ತೀರ್ಣವನ್ನು ಹೊಂದಿದ್ದು ಹೆಚ್ಚಿನ ನೀರಾವರಿ ವ್ಯವಸ್ಥೆಯನ್ನು ಕಲ್ಪಿಸಲು ಈಗಾಗಲೇ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಹೆಚ್ ಸಿ ಮಹದೇವಪ್ಪ ಸಂಸದ ಸುನಿಲ್ ಬೋಸ್ ಸೂಚನೆ ನೀಡಿದ್ದೂ ಅದರಂತೆ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಿದ್ದಾರೆ. ಹಾಗಾಗಿ ರೈತರು ಗೊಂದಲಕ್ಕೆ ಈಡಾಗುವುದು ಬೇಡ ಎಂದು ಕೆಪಿಸಿಸಿ ಜಿಲ್ಲಾ ವಕ್ತಾರ ಮಧುವನಹಳ್ಳಿ ಎಸ್. ಶಿವಕುಮಾರ್ ತಿಳಿಸಿದರು.

ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಜಿಲ್ಲಾ ಉಸ್ತುವಾರಿ ಸಚಿವ ವೆಂಕಟೇಶ್, ಹಾಗೂ ಸಂಸದ ಸುನೀಲ್ ಬೋಸ್ ರವರು ಧರಣಿ ಸ್ಥಳಕ್ಕೆ ಬರಲಿಲ್ಲವೆಂಬ ಕಾರಣ ಒಡ್ಡಿ ಅವರನ್ನು ಹುಡುಕಿ ತರುವಂತೆ ಪೊಲೀಸ್ ಠಾಣೆಯಲ್ಲಿ ದೂರು ನೀಡಬಾರದಾಗಿತ್ತು.

ಹನೂರು ವಿಧಾನಸಭಾ ಕ್ಷೇತ್ರಕ್ಕೆ ಈಗಾಗಲೇ ನೀರಾವರಿ ವ್ಯವಸ್ಥೆಯನ್ನು ಕಲ್ಪಿಸಲು ಅಧಿಕಾರಿಗಳ ಜೊತೆ ಸಮಾಲೋಚಿಸಿ ಆದಷ್ಟು ಬೇಗ ನೀರಾವರಿ ವ್ಯವಸ್ಥೆಯನ್ನ ಜಾರಿಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಕ್ರಿಯಾಯೋಜನೆ ತಯಾರಿಸಲು ಸೂಚನೆ ನೀಡಿದ್ದಾರೆ. ಅಧಿಕಾರಿಗಳು ಸಹ ಸಕ್ರಿಯವಾಗಿ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ರೈತ ಸಂಘದ ಪದಾಧಿಕಾರಿಗಳು ಆತುರದ ನಿರ್ಧಾರ ತೆಗೆದುಕೊಳ್ಳದೆ ಗೊಂದಲಕ್ಕೆ ಒಳಗಾಗದೆ ತಾಳ್ಮೆಯಿಂದ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯದು. ನಮ್ಮ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಲೋಕಸಭಾ ಸದಸ್ಯರು ಧರಣಿ ಸ್ಥಳಕ್ಕೆ ಬರಲಿಲ್ಲ ಎಂಬ ಒಂದೇ ಒಂದು ಕಾರಣ ಹೇಳಿ ದೂರು ನೀಡಿರುವುದು ಸರಿಯಲ್ಲ. ಅವರು ಸ್ಥಳಕ್ಕೆ ಬಾರದಿರುವ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸುವ ಬದಲು ನೀರಾವರಿ ಯೋಜನೆಗೆ ಸಂಬಂಧಪಟ್ಟಂತೆ ಏನು ಯೋಜನೆಗಳನ್ನು ರೂಪಿಸಿದ್ದಾರೆ, ಅಭಿವೃದ್ಧಿಗೆ ಪೂರಕವಾಗಿಯೇ ಕೆಲಸ ಮಾಡುತ್ತಿದ್ದಾರೆ ಎಂಬುದನ್ನ ತಿಳಿದುಕೊಳ್ಳುವುದು ಒಳ್ಳೆಯದು ಎಂದರು.

ರೈತರ ಪರ ಸರ್ಕಾರ : ನಮ್ಮ ಕಾಂಗ್ರೆಸ್ ಸರ್ಕಾರ ರೈತ ಪರವಾದಂತಹ ಸರ್ಕಾರವಾಗಿದೆ. ರೈತರಿಗೆ ಎಲ್ಲಾ ರೀತಿಯ ನೆರವನ್ನು ನೀಡಲು ಸಿದ್ಧವಾಗಿದೆ. ಇದೀಗ ಕಲಾಪಗಳು ಆರಂಭವಾಗಿರುವುದರಿಂದ ಕಲಾಪಗಳು ಮುಗಿದ ಬಳಿಕ ನಿಮ್ಮಲ್ಲಿಗೆ ಸಂಸದರು ಆಗುತ್ತಿಲ್ಲ ಮಂತ್ರಿಗಳು ಬಂದು ಸಮಸ್ಯೆಗಳನ್ನ ಕೇಳಲಿದ್ದಾರೆ ಎಂದರು.

ಹಲವಾರು ವರ್ಷಗಳಿಂದ ಮಾಜಿ ಸಚಿವ ದಿ. ರಾಜುಗೌಡ, ಸಂಸದರಾದ ದಿ ಶ್ರೀನಿವಾಸ್ ಪ್ರಸಾದ್, ಆದ್ರವ ನಾರಾಯಣ ಮಾಜಿ ಶಾಸಕರಾದ ಆರ್ ನರೇಂದ್ರ ರವರು ಕಳೆದ ಹಲವಾರು ವರ್ಷಗಳಿಂದ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಭೌಗೋಳಿಕವಾಗಿ ವಿಸ್ತೀರ್ಣ ಹೊಂದಿರುವುದರಿಂದ ಅನುದಾನದ ಕೊರತೆಯಿಂದ ಕಾಮಗಾರಿಗಳು ವಿಳಂಬವಾಗಿದೆ. ಇದೀಗ ಸಮಾಜ ಕಲ್ಯಾಣ ಇಲಾಖೆ ಸಚಿವ ಎಸ್ ಸಿ ಮಹದೇವಪ್ಪ ಹಾಗೂ ಸಂಸದ ಸುನಿಲ್ ಬೋಸ್ ರವರು ಸಭೆ ನಡೆಸಿ 25 ಸಾವಿರ ಎಕರೆ ಪ್ರದೇಶಗಳಿಗೆ ನೀರಾವರಿ ಯೋಜನೆ ಕಲ್ಪಿಸಲು ಡಿಪಿಆರ್ ಸಿದ್ದಪಡಿಸಲು ಸೂಚನೆ ನೀಡಿದ್ದಾರೆ. ಇದಲ್ಲದೆ ಸರ್ವೆ ಕಾರ್ಯವು ಪ್ರಗತಿಯಲ್ಲಿರುವುದರಿಂದ ರೈತ ಮುಖಂಡರುಗಳು ಸಹಕರಿಸಬೇಕು ಎಂದು ಮನವಿ ಮಾಡಿ ಇದ್ದಾರೆ

ವರದಿ : ನಿಂಪು ಬ್ರದರ್ಸ್

Releated Posts

ಕೊಳ್ಳೇಗಾಲ ಭೀಮನಗರದ ಮೈಸೂರಿನಲ್ಲಿ ಇರುವ ಗುಪ್ತಚರ ಎಎಸ್ಐ ಶಿವಕುಮಾರ್ ಗೆ ಮುಖ್ಯಮಂತ್ರಿ ಗಳ ಚಿನ್ನದ ಪದಕ

ಕೊಳ್ಳೇಗಾಲ/ ಮೈಸೂರು : ಕೊಳ್ಳೇಗಾಲ ಪಟ್ಟಣದ ಭೀಮನಗರದ ನಿವಾಸಿ ಹಾಲಿ ಮೈಸೂರಿನಲ್ಲಿ ಪೋಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಎಸ್.ಶಿವಕುಮಾರ್ ಅವರು ಮುಖ್ಯಮಂತ್ರಿ ಗಳ ಪದಕ…

ByByN Rajesh Apr 3, 2026

ಕೊಳ್ಳೇಗಾಲ : ಮಹಿಳಾ ಸಬಲೀಕರಣದಿಂದ ಕುಟುಂಬದ ಅಭಿವೃದ್ಧಿ – ಶಾಸಕ ಎ.ಆರ್. ಕೃಷ್ಣಮೂರ್ತಿ

ಕೊಳ್ಳೇಗಾಲ. ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಇಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಯೋಜಿಸಿದ್ದರು. ಪಟ್ಟಣದ ವೆಂಕಟೇಶ್ವರ ಮಹಲ್ ನಲ್ಲಿ ಇಂದು…

ByByN Rajesh Apr 1, 2026

ನಿವೃತ್ತಿಯಾದ ಸೆಸ್ಕಾಂ ಎಇಇ ಎಂ ರಾಜು ಅವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

ನಿವೃತ್ತಿಯಾದ ಸೆಸ್ಕ್ ಎಇಇ ಎಂ.ರಾಜುಗೆ ಹೃದಯ ಸ್ಪರ್ಶಿ ಬೀಳ್ಕೊಡುಗೆ ಕೊಳ್ಳೇಗಾಲ : ಸೇವೆಯಿಂದ ನಿವೃತ್ತಿ ಹೊಂದಿದ ಕೊಳ್ಳೇಗಾಲ ಸೆಸ್ಕಾಂ ಉಪವಿಭಾಗದ ಎಇಇ ಎಂ.ರಾಜು ಅವರಿಗೆ…

ByByN Rajesh Mar 31, 2026

Leave a Reply

Your email address will not be published. Required fields are marked *

Scroll to Top