/* Change button hover color to red */
button:hover,
.wp-block-button__link:hover,
input[type="submit"]:hover {
    background-color: red !important;
    color: #fff !important; /* Makes text white for contrast */
}

  • Home
  • ಜಿಲ್ಲೆ
  • ಹನೂರಿನಲ್ಲಿ ರಸ್ತೆ ಹಾಗೂ ಕಿರು ಸೇತುವೆ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ ನಡೆಸಿದ ಶಾಸಕ ಎಂ.ಆರ್. ಮಂಜುನಾಥ್
Image

ಹನೂರಿನಲ್ಲಿ ರಸ್ತೆ ಹಾಗೂ ಕಿರು ಸೇತುವೆ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ ನಡೆಸಿದ ಶಾಸಕ ಎಂ.ಆರ್. ಮಂಜುನಾಥ್

ಶಾಸಕ ಎಂಆರ್ ಮಂಜುನಾಥ್ ವಿವಿಧಡೆ ಭೇಟಿ ಸೇತುವೆ ಕಾಮಗಾರಿಗೆ ಸ್ಥಳ ಪರಿಶೀಲನೆ ಹಾಗೂ ರೈತರ ಜಮೀನುಗಳಿಗೆ ತೆರಳುವ ರಸ್ತೆ ಮತ್ತು ಪರುಷೆ ಹಾದಿ ಮಾರ್ಗ ಪರಿಶೀಲನೆ ನಡೆಸಿದರು…

ಹನೂರು ಪಟ್ಟಣದ ಸ್ವಾಮಿ ಹಳ್ಳ ಬಳಿ ಉದ್ದೇಶಿತ ಸೇತುವೆ ನಿರ್ಮಾಣ ಸ್ಥಳ ಹಾಗೂ ಕುರುಬರ ಸ್ಮಶಾನಕ್ಕೆ ತೆರಳುವ ರಸ್ತೆ ಹಾಗೂ ಪಟ್ಟಣದ ಆರ್ ಎಸ್ ದೊಡ್ಡಿಯಿಂದ ಚಿಂಚಳ್ಳಿ ರಸ್ತೆಗೆ ಸಂಪರ್ಕ ಕಲ್ಪಿಸುವ ಪರುಷೆ ಹಾದಿ ಪರಿಶೀಲನೆ ನಡೆಸಿದ ಶಾಸಕ ಎಂಆರ್ ಮಂಜುನಾಥ್…

ನಿವಾಸಿಗಳ ಹಾಗೂ ರೈತರ ಒತ್ತಾಯದ ಮೇರೆಗೆ ಸ್ಥಳ ಪರಿಶೀಲನೆ : ಪಟ್ಟಣದಿಂದ ಸ್ವಾಮಿ ಹಳ್ಳ ದಾಟಿಕೊಂಡು ಕುರುಬರ ಸ್ಮಶಾನಕ್ಕೆ ತೆರಳುವ ಸ್ಥಳದಲ್ಲಿ ಉದ್ದೇಶವಾಗಿರುವ ಸೇತುವೆ ಕಾಮಗಾರಿ ನಡೆಸುವ ಸ್ಥಳವನ್ನು ಪರಿಶೀಲನೆ ನಡೆಸಿ ಮುಂದಿನ ದಿನಗಳಲ್ಲಿ ಉತ್ತಮ ಸೇತುವೆ ನಿರ್ಮಾಣ ಮಾಡಿ ಕ್ರಮ ಕೈಗೊಳ್ಳಲು ಮೊದಲ ಹಂತವಾಗಿ 20 ಲಕ್ಷ ಹಣವನ್ನು ಬಿಡುಗಡೆಗೊಳಿಸಲಾಗಿದೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಕ್ರಿಯಾಯೋಜನೆ ಪಟ್ಟಿ ತಯಾರಿಸಿ ಸೇತುವೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದರು…

ರಸ್ತೆ ಅಭಿವೃದ್ಧಿಗೆ ರೈತರು ಸಹಕರಿಸಿ : ಹನೂರು ಪಟ್ಟಣದಿಂದ ಕುರುಬರ ಮಸಣಕ್ಕೆ ತೆರಳುವ ಪರುಷೆ ಹಾದಿ ಸಂಪರ್ಕ ಕಲ್ಪಿಸುವ ರಸ್ತೆ ಅಕ್ಕಪಕ್ಕದ ರೈತರು ಹಾಗೂ ಆರ್ ಎಸ್ ದೊಡ್ಡಿಯಿಂದ ಚಿಂಚಳ್ಳಿಗೆ ಸಂಪರ್ಕ ಕಲ್ಪಿಸುವ ಅಕ್ಕಪಕ್ಕದ ರೈತರು ಒಂದೆಡೆ ಸೇರಿ ಸಹಕಾರ ನೀಡಿದರೆ ಸುಸಜ್ಜಿತವಾದ ರಸ್ತೆ ನಿರ್ಮಾಣ ಮಾಡಿದರೆ ಈ ಭಾಗದ ರೈತರಿಗೆ ಜಮೀನಿಗೆ ಚಿನ್ನದ ಬೆಲೆ ಬರಲಿದೆ ಹೀಗಾಗಿ ರೈತರು ಸದ್ಬಳಕೆ ಮಾಡಿಕೊಂಡು ಸಂಪೂರ್ಣವಾಗಿ ಸಹಕಾರ ನೀಡಿದರೆ ಉತ್ತಮ ರಸ್ತೆ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸ್ಥಳದಲ್ಲಿದ್ದ ರೈತರ ಮನವಿಗೆ ಸ್ಪಂದಿಸಿ ಮಾಹಿತಿಯನ್ನು ನೀಡಿದರು.

ಕಿರಿದಾದ ರಸ್ತೆಗಳು ಅನಾನುಕೂಲ : ಹಿಂದಿನಿಂದಲೂ ಕಿರಿದಾದ ರಸ್ತೆಗಳಾಗಿರುವುದರಿಂದ ಈ ಭಾಗದಲ್ಲಿರುವ ರೈತರ ಜಮೀನುಗಳಿಗೆ ತೆರಳಲು ಹಾಗೂ ಬಂದು ಹೋಗಲು ತೊಂದರೆ ಉಂಟಾಗಿತ್ತು ಹಲವಾರು ದಿನಗಳಿಂದ ರೈತರು ರಸ್ತೆ ನಿರ್ಮಾಣ ಮಾಡಿ ಕೊಡುವಂತೆ ಮನವಿ ಮಾಡುತ್ತಿದ್ದಾರೆ ಹೀಗಾಗಿ ಪರಿಶೀಲನೆ ನಡೆಸಿದ್ದೇನೆ ಮುಂದಿನ ದಿನಗಳಲ್ಲಿ ರೈತರು ತಮ್ಮ ಜಮೀನುಗಳಿಗೆ ತೆರಳುವ ರಸ್ತೆ ಅಭಿವೃದ್ಧಿಪಡಿಸಲು ಸಹಕಾರ ನೀಡಬೇಕು ಎಂದರು.

ಡಕ್ ನಿರ್ಮಾಣಕ್ಕೆ ಮನವಿ : ಆರ್ ಎಸ್ ದೊಡ್ಡಿ ಗ್ರಾಮದಿಂದ ಚಿಂಚಳ್ಳಿ ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಆರ್ ಎಸ್ ದೊಡ್ಡಿ ಯಿಂದ ಬರುವ ಕೊಳಚೆ ನೀರು, ರಸ್ತೆಯಲ್ಲಿ ಹರಿಯುತ್ತಿದ್ದು ಡಕ್ ನಿರ್ಮಾಣ ಮಾಡಿ ಚರಂಡಿ ವ್ಯವಸ್ಥೆಯನ್ನು ಕಲ್ಪಿಸುವ ಮೂಲಕ ರಸ್ತೆಯಲ್ಲಿ ಓಡಾಡಲು ಅನುಕೂಲ ಕಲ್ಪಿಸುವಂತೆ ರೈತರು ಮನವಿ ಮಾಡಿದರು

ಇದಕ್ಕೆ ಪೂರಕವಾಗಿ ಸ್ಪಂದಿಸಿದ ಶಾಸಕರು ಈ ಭಾಗದಲ್ಲಿರುವ ರೈತರಿಗೆ ತೋಟದ ಮನೆಗಳಲ್ಲಿ ವಾಸಿಸುವ ಜನತೆಗೆ ಉತ್ತಮವಾದ ರಸ್ತೆ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗುವುದು ಅದರಂತೆ ರೈತರು ಸಹ ಪೂರಕವಾಗಿ ಸ್ಪಂದಿಸಿದರೆ ರಸ್ತೆ ಅಭಿವೃದ್ಧಿಯೇ ಆದ್ಯತೆ ನೀಡಲಾಗುವುದು ಎಂದು ರೈತರಿಗೆ ಭರವಸೆ ನೀಡಿದರು.

ಇದೆ ವೇಳೆಯಲ್ಲಿ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಮುದ್ದುಗಾಮಶೆಟ್ಟಿ ಮಣಿ ಕೌಂಡರ್ ವೇಲು ಸ್ವಾಮಿ ಜಗನ್ನಾಥ್ ನಾಯ್ಡು ರಾಜು ನಾಯ್ಡು, ಮಂಜೇಶ್ ಇನ್ನಿತರ ರೈತರು ಉಪಸ್ಥಿತರಿದ್ದರು.

ವರದಿ : ನಿಂಪು ರಾಜೇಶ್

Releated Posts

ಕೊಳ್ಳೇಗಾಲ ಭೀಮನಗರದ ಮೈಸೂರಿನಲ್ಲಿ ಇರುವ ಗುಪ್ತಚರ ಎಎಸ್ಐ ಶಿವಕುಮಾರ್ ಗೆ ಮುಖ್ಯಮಂತ್ರಿ ಗಳ ಚಿನ್ನದ ಪದಕ

ಕೊಳ್ಳೇಗಾಲ/ ಮೈಸೂರು : ಕೊಳ್ಳೇಗಾಲ ಪಟ್ಟಣದ ಭೀಮನಗರದ ನಿವಾಸಿ ಹಾಲಿ ಮೈಸೂರಿನಲ್ಲಿ ಪೋಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಎಸ್.ಶಿವಕುಮಾರ್ ಅವರು ಮುಖ್ಯಮಂತ್ರಿ ಗಳ ಪದಕ…

ByByN Rajesh Apr 3, 2026

ಕೊಳ್ಳೇಗಾಲ : ಮಹಿಳಾ ಸಬಲೀಕರಣದಿಂದ ಕುಟುಂಬದ ಅಭಿವೃದ್ಧಿ – ಶಾಸಕ ಎ.ಆರ್. ಕೃಷ್ಣಮೂರ್ತಿ

ಕೊಳ್ಳೇಗಾಲ. ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಇಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಯೋಜಿಸಿದ್ದರು. ಪಟ್ಟಣದ ವೆಂಕಟೇಶ್ವರ ಮಹಲ್ ನಲ್ಲಿ ಇಂದು…

ByByN Rajesh Apr 1, 2026

ನಿವೃತ್ತಿಯಾದ ಸೆಸ್ಕಾಂ ಎಇಇ ಎಂ ರಾಜು ಅವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

ನಿವೃತ್ತಿಯಾದ ಸೆಸ್ಕ್ ಎಇಇ ಎಂ.ರಾಜುಗೆ ಹೃದಯ ಸ್ಪರ್ಶಿ ಬೀಳ್ಕೊಡುಗೆ ಕೊಳ್ಳೇಗಾಲ : ಸೇವೆಯಿಂದ ನಿವೃತ್ತಿ ಹೊಂದಿದ ಕೊಳ್ಳೇಗಾಲ ಸೆಸ್ಕಾಂ ಉಪವಿಭಾಗದ ಎಇಇ ಎಂ.ರಾಜು ಅವರಿಗೆ…

ByByN Rajesh Mar 31, 2026

Leave a Reply

Your email address will not be published. Required fields are marked *

Scroll to Top