/* Change button hover color to red */
button:hover,
.wp-block-button__link:hover,
input[type="submit"]:hover {
    background-color: red !important;
    color: #fff !important; /* Makes text white for contrast */
}

  • Home
  • ಜಿಲ್ಲೆ
  • ಹನೂರು – ರಾಮಾಪುರದಲ್ಲಿ ಯಶಸ್ವಿಯಾಗಿ ನಡೆದ ಮಾಸಿಕ ಸಂತೆ
Image

ಹನೂರು – ರಾಮಾಪುರದಲ್ಲಿ ಯಶಸ್ವಿಯಾಗಿ ನಡೆದ ಮಾಸಿಕ ಸಂತೆ

ಹನೂರು : ತಾಲ್ಲೂಕು ಪಂಚಾಯಿತಿ ವತಿಯಿಂದ ಸಂಜೀವಿನಿ ಎನ್ ಆರ್ ಎಂ ಎಲ್ ಯೋಜನೆಯಡಿ ತಾಲೂಕಿನ ರಾಮಾಪುರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಹತ್ತಿರ ಮಾಸಿಕ ಸಂತೆಯನ್ನು ರಾಮಾಪುರ ಪೊಲೀಸ್ ಸಬ್ ಇನ್ಸ್ ಫೆಕ್ಟರ್
ಈಶ್ವರ್ ರವರು ಉದ್ಘಾಟಿಸಿದರು.

ನಂತರ ಮಾತನಾಡಿದ ಈಶ್ವರ್ ತಾಲ್ಲೂಕಿನ ವಿವಿದ ಗ್ರಾಮ ಪಂಚಾಯಿತಿಗಳ ಮಹಿಳಾ ಸ್ವ ಸಹಾಯ ಗುಂಪುಗಳ ಒಕ್ಕೂಟಗಳಿಂದ ಮಹಿಳೆಯರು ಉತ್ಪಾದನೆ ಮಾಡಿರುವ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿಸುವ ಸಲುವಾಗಿ ಮಾಸಿಕ ಸಂತೆ ಏರ್ಪಡಿಸುತ್ತಿರುವುದು ಮಹಿಳೆಯರಿಗೆ ತುಂಬಾ ಉಪಯೋಗವಾಗುತ್ತದೆ.

ಈ ಪ್ರಕ್ರಿಯೆಯು ಮಹಿಳೆಯರ ಆರ್ಥಿಕ ಅಭಿವೃದ್ಧಿಗೆ ಸಹಾಯಕವಾಗಿದ್ದು, ಇದರಿಂದ ಮಹಿಳೆಯರು ಸ್ವಾಲಂಬನೆಯಿಂದ ಜೀವನ ನಿರ್ವಹಣೆ ಮಾಡಲು ಅನುಕೂಲವಾಗಲಿದೆ. ಮಹಿಳೆಯರು ಕುಟುಂಬಕ್ಕೆ ಮಾದರಿಯಾಗಿದ್ದು, ಮಾದಕ ಮುಕ್ತ ಕರ್ನಾಟಕ ಅಭಿಯಾನದಡಿ ಕುಟುಂಬಸ್ಥರು ಮತ್ತು ನೆರೆಹೊರೆಯವರು ಮಾದಕ ವ್ಯಸನದಿಂದ ಮುಕ್ತಗೊಳಿಸಲು ಪ್ರಯತ್ನಿಸಿ. ಮುಂದಿನ ಯುವಪೀಳಿಗೆ ಮಾದಕ ವಸ್ತುಗಳ ಚಟದಿಂದ ಮುಕ್ತರಾಗಲು ಪಣತೊಡಬೇಕೆಂದು ತಿಳಿಸಿದರು.

ಬಾಲ್ಯವಿವಾಹ ಮತ್ತು ಪೋಕ್ಸೋ ಪ್ರಕರಣಗಳು ಸಾರ್ವಜನಿಕವಾಗಿ ನಿಮ್ಮ ಹತ್ತಿರ ನೆರೆಹೊರೆಯಲ್ಲಿ ಕಂಡುಬಂದರೆ ತಕ್ಷಣ ಸರ್ಕಾರಿ ಸಹಾಯವಾಣಿಗೆ ಕರೆಮಾಡಿ ತಿಳಿಸಬೇಕೆಂದು ಎಲ್ಲರಿಗೂ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಎನ್.ಆರ್.ಎಲ್.ಎಂ ವಲಯ ಮೇಲ್ವಿಚಾರಕರಾದ ಕುಮಾರಿ.ಸಿ, ತಾಲ್ಲೂಕು ವ್ಯವಸ್ಥಾಪಕರಾದ ಲಿಂಗರಾಜು.ಬಿ, ಪೋಲೀಸ್ ಇಲಾಖೆಯ ಸಿಬ್ಬಂದಿಗಳು ತಾಲ್ಲೂಕು ಸಂಜೀವಿನಿ ಸಿಬ್ಬಂದಿಗಳು, ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳ ಸಮುದಾಯ ಸಂಪನ್ಮೂಲ ವ್ಯಕ್ತಿಗಳು ಉಪಸ್ಥಿತರಿದ್ದರು.

ವರದಿ : ಸಾಗರ್ ನಿಂಪು

Releated Posts

ಕೊಳ್ಳೇಗಾಲ ಭೀಮನಗರದ ಮೈಸೂರಿನಲ್ಲಿ ಇರುವ ಗುಪ್ತಚರ ಎಎಸ್ಐ ಶಿವಕುಮಾರ್ ಗೆ ಮುಖ್ಯಮಂತ್ರಿ ಗಳ ಚಿನ್ನದ ಪದಕ

ಕೊಳ್ಳೇಗಾಲ/ ಮೈಸೂರು : ಕೊಳ್ಳೇಗಾಲ ಪಟ್ಟಣದ ಭೀಮನಗರದ ನಿವಾಸಿ ಹಾಲಿ ಮೈಸೂರಿನಲ್ಲಿ ಪೋಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಎಸ್.ಶಿವಕುಮಾರ್ ಅವರು ಮುಖ್ಯಮಂತ್ರಿ ಗಳ ಪದಕ…

ByByN Rajesh Apr 3, 2026

ಕೊಳ್ಳೇಗಾಲ : ಮಹಿಳಾ ಸಬಲೀಕರಣದಿಂದ ಕುಟುಂಬದ ಅಭಿವೃದ್ಧಿ – ಶಾಸಕ ಎ.ಆರ್. ಕೃಷ್ಣಮೂರ್ತಿ

ಕೊಳ್ಳೇಗಾಲ. ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಇಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಯೋಜಿಸಿದ್ದರು. ಪಟ್ಟಣದ ವೆಂಕಟೇಶ್ವರ ಮಹಲ್ ನಲ್ಲಿ ಇಂದು…

ByByN Rajesh Apr 1, 2026

ನಿವೃತ್ತಿಯಾದ ಸೆಸ್ಕಾಂ ಎಇಇ ಎಂ ರಾಜು ಅವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

ನಿವೃತ್ತಿಯಾದ ಸೆಸ್ಕ್ ಎಇಇ ಎಂ.ರಾಜುಗೆ ಹೃದಯ ಸ್ಪರ್ಶಿ ಬೀಳ್ಕೊಡುಗೆ ಕೊಳ್ಳೇಗಾಲ : ಸೇವೆಯಿಂದ ನಿವೃತ್ತಿ ಹೊಂದಿದ ಕೊಳ್ಳೇಗಾಲ ಸೆಸ್ಕಾಂ ಉಪವಿಭಾಗದ ಎಇಇ ಎಂ.ರಾಜು ಅವರಿಗೆ…

ByByN Rajesh Mar 31, 2026

Leave a Reply

Your email address will not be published. Required fields are marked *

Scroll to Top