/* Change button hover color to red */
button:hover,
.wp-block-button__link:hover,
input[type="submit"]:hover {
    background-color: red !important;
    color: #fff !important; /* Makes text white for contrast */
}

  • Home
  • ಜಿಲ್ಲೆ
  • ಕೊಳ್ಳೇಗಾಲದಲ್ಲಿ ಪೋಷಕರ ಶಿಕ್ಷಕರ ಮಹಾಸಭೆ ಕಾರ್ಯಕ್ರಮ
Image

ಕೊಳ್ಳೇಗಾಲದಲ್ಲಿ ಪೋಷಕರ ಶಿಕ್ಷಕರ ಮಹಾಸಭೆ ಕಾರ್ಯಕ್ರಮ

ಕೊಳ್ಳೇಗಾಲ. ಪಟ್ಟಣದ ಸರ್ಕಾರಿ ಎಸ್.ವಿ.ಕೆ ಬಾಲಿಕಾ ಪದವಿ ಪೂರ್ವ ಕಾಲೇಜುನಲ್ಲಿ ಶುಕ್ರವಾರ ಪೋಷಕರ-ಶಿಕ್ಷಕರ ಮಹಾಸಭೆ-2025 ಕಾರ್ಯಕ್ರಮವನ್ನು ಆಯೋಜಿಸಿದ್ದರು.

ಬೆಂಗಳೂರು ಶಾಲಾ ಶಿಕ್ಷಣ ಇಲಾಖೆ, ಚಾ.ನಗರ ಜಿ.ಪಂ ವತಿಯಿಂದ ನಡೆದ ಕಾರ್ಯಕ್ರಮವನ್ನು ತಾ.ಪಂ ಇಒ ಗುರುಶಾಂತಪ್ಪ ಬೆಳ್ಳುಂಡಗಿ ಅವರು ಉದ್ಘಾಟನೆ ಮಾಡಿ ಬಳಿಕ ಮಾತನಾಡಿ, ಒಂದು ಮಗುವಿನ ಉತ್ತಮ ಬೆಳವಣಿಗೆಗೆ ಪೋಷಕರು ಹಾಗೂ ಶಿಕ್ಷಕರ ಪಾತ್ರ ಬಹಳ ಮುಖ್ಯವಾಗಿದೆ.
ಶ್ರಧ್ದೆಯಿಂದ ಉನ್ನತ ಶಿಕ್ಷಣ ಪಡೆದಾಗ ಮಾತ್ರ ಜೀವನದಲ್ಲಿ ಎದುರಾಗುವ ಸಮಸ್ಯೆಗಳನ್ನು ಎದುರಿಸುವ ಶಕ್ತಿ ಇರುವುದು ಶಿಕ್ಷಣದಿಂದ ಮಾತ್ರ ಸಾಧ್ಯ.
ಆದ್ದರಿಂದ ವಿದ್ಯಾರ್ಥಿಗಳು ಉನ್ನತ್ತ ಶಿಕ್ಷಣ ಪಡೆಯುವ ಮೂಲಕ ಉತ್ತಮ ಜೀವನವನ್ನು ರೂಪಿಸಿಕೊಳ್ಳಬೇಕು ಎಂದು ತಿಳಿಸಿ, ತಾ.ಪಂ ವತಿಯಿಂದ 150 ಚೇರ್ ಗಳನ್ನು ಮುಂದಿನ ತಿಂಗಳು ಕೊಡಿಸುವ ಭರವಸೆ ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಅಂಗವಿಕಲ ವಿದ್ಯಾರ್ಥಿಗಳಿಗಾಗಿ ಶೌಚಾಲಯ ನಿರ್ಮಾಣ ಮಾಡಿಕೊಡುವ ಭರವಸೆ ನೀಡಿದರು.
ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಪಡೆದ ಹಾಗೂ ಹೆಚ್ಚಿನ ಹಾಜರಾತಿ ಪಡೆದಿರುವ ಮಕ್ಕಳಿಗೆ ಸನ್ಮಾನಿಸಿ ಬಹುಮಾನ ವಿತರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರು ರಾಜೇಂದ್ರ, ಬಿಇಒ ಮಂಜುಳಾ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರು ಹರ್ಷ, ಪ್ರಾಂಶುಪಾಲರು ಡಾ.ಮಂಗಳಮೂರ್ತಿ, ಉಪಪ್ರಾಂಶುಪಾಲರು ವಿಶ್ವನಾಥ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಜೋಸೆಫ್ ಅಲೆಕ್ಸಾಂಡರ್, ಡಯಟ್ ಉಪನ್ಯಾಸಕರು ಕಾತ್ಯಾಯಿನಿ, ಪ್ರೌಢಶಾಲಾ ವಿಭಾಗ ಎಸ್.ಡಿ.ಎಂ.ಸಿ ಅಧ್ಯಕ್ಷರು ಪವಿತ್ರ ಹಾಗೂ ಇತರರು ಇದ್ದರು.

ವರದಿ ; ನಿಂಪು ಬ್ರದರ್ಸ್

Releated Posts

ಕೊಳ್ಳೇಗಾಲ ಭೀಮನಗರದ ಮೈಸೂರಿನಲ್ಲಿ ಇರುವ ಗುಪ್ತಚರ ಎಎಸ್ಐ ಶಿವಕುಮಾರ್ ಗೆ ಮುಖ್ಯಮಂತ್ರಿ ಗಳ ಚಿನ್ನದ ಪದಕ

ಕೊಳ್ಳೇಗಾಲ/ ಮೈಸೂರು : ಕೊಳ್ಳೇಗಾಲ ಪಟ್ಟಣದ ಭೀಮನಗರದ ನಿವಾಸಿ ಹಾಲಿ ಮೈಸೂರಿನಲ್ಲಿ ಪೋಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಎಸ್.ಶಿವಕುಮಾರ್ ಅವರು ಮುಖ್ಯಮಂತ್ರಿ ಗಳ ಪದಕ…

ByByN Rajesh Apr 3, 2026

ಕೊಳ್ಳೇಗಾಲ : ಮಹಿಳಾ ಸಬಲೀಕರಣದಿಂದ ಕುಟುಂಬದ ಅಭಿವೃದ್ಧಿ – ಶಾಸಕ ಎ.ಆರ್. ಕೃಷ್ಣಮೂರ್ತಿ

ಕೊಳ್ಳೇಗಾಲ. ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಇಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಯೋಜಿಸಿದ್ದರು. ಪಟ್ಟಣದ ವೆಂಕಟೇಶ್ವರ ಮಹಲ್ ನಲ್ಲಿ ಇಂದು…

ByByN Rajesh Apr 1, 2026

ನಿವೃತ್ತಿಯಾದ ಸೆಸ್ಕಾಂ ಎಇಇ ಎಂ ರಾಜು ಅವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

ನಿವೃತ್ತಿಯಾದ ಸೆಸ್ಕ್ ಎಇಇ ಎಂ.ರಾಜುಗೆ ಹೃದಯ ಸ್ಪರ್ಶಿ ಬೀಳ್ಕೊಡುಗೆ ಕೊಳ್ಳೇಗಾಲ : ಸೇವೆಯಿಂದ ನಿವೃತ್ತಿ ಹೊಂದಿದ ಕೊಳ್ಳೇಗಾಲ ಸೆಸ್ಕಾಂ ಉಪವಿಭಾಗದ ಎಇಇ ಎಂ.ರಾಜು ಅವರಿಗೆ…

ByByN Rajesh Mar 31, 2026

Leave a Reply

Your email address will not be published. Required fields are marked *

Scroll to Top