/* Change button hover color to red */
button:hover,
.wp-block-button__link:hover,
input[type="submit"]:hover {
    background-color: red !important;
    color: #fff !important; /* Makes text white for contrast */
}

  • Home
  • ಜಿಲ್ಲೆ
  • ತತಮಿಳುನಾಡು ಕಡೆಗೆ ಭತ್ತದ ಹುಲ್ಲು ಅಕ್ರಮವಾಗಿ ಸಾಗಣೆ – ಚಾಮರಾಜನಗರ ಜಿಲ್ಲಾ ಆಡಳಿತ ಮೌನವೇಕೆ ?
Image

ತತಮಿಳುನಾಡು ಕಡೆಗೆ ಭತ್ತದ ಹುಲ್ಲು ಅಕ್ರಮವಾಗಿ ಸಾಗಣೆ – ಚಾಮರಾಜನಗರ ಜಿಲ್ಲಾ ಆಡಳಿತ ಮೌನವೇಕೆ ?

ಕೊಳ್ಳೇಗಾಲ: ಕೊಳ್ಳೇಗಾಲ ತಾಲ್ಲೂಕು ಮತ್ತು ನರಸೀಪುರ ತಾಲೂಕಿನ ಸುತ್ತಮುತ್ತಲಿನ ಜಮೀನುಗಳಿಂದ ಜಾನುವಾರುಗಳ ಮೇವುಗಳನ್ನು ಅಕ್ರಮವಾಗಿ ಸಾಗಾಣೆ ಮಾಡುತ್ತಿರುವ ಬಗ್ಗೆ ಕೊಳ್ಳೇಗಾಲ ತಾಲ್ಲೂಕಿನ ಗ್ರಾಮೀಣ ಭಾಗದ ರೈತರಿಂದ ವ್ಯಾಪಕ ದೂರುಗಳು ಕೇಳಿ ಬರುತ್ತಿದೆ.

ಈಗಾಗಲೇ ಪ್ರಸಕ್ತ ಸಾಲಿನಲ್ಲಿ ಭತ್ತದ ಬೆಳೆ ಕಟಾವಿಗೆ ಬಂದಿದ್ದು, ನರಸೀಪುರ ತಾಲೂಕಿನ ಮೂಗೂರು, ಮಾಡ್ರಳ್ಳಿ, ತಲಕಾಡು ಸುತ್ತಮುತ್ತಲಿನ ಜಮೀನುಗಳಲ್ಲಿ ಭತ್ತ ಕಟಾವು ಮಾಡಲಾಗುತ್ತಿದೆ.

ಭತ್ತ ಕಟಾವು ಆದ ನಂತರ ಜಾನುವಾರುಗಳ ಭತ್ತದ ಹುಲ್ಲನ್ನು ತಮಿಳು ನಾಡು ಭಾಗದ ದಲ್ಲಾಳಿಗಳು ಬಂದು ಹುಲ್ಲನ್ನು ರೈತರಿಂದ ಖರೀದಿಸಿ ಅಕ್ರಮವಾಗಿ ತಮಿಳುನಾಡಿನ ಕಡೆಗೆ ಸಾಗಿಸಲಾಗುತ್ತಿದೆ.

ದಲ್ಲಾಳಿಗಳ ಮದ್ಯವಸ್ತಿಕೆಯಿಂದ ಬಹುತೇಕ ಭತ್ತ ಬೆಳೆದ ರೈತರು ತಮ್ಮ ಹುಲ್ಲುಗಳನ್ನು ತಮಿಳುನಾಡು ಭಾಗದವರಿಗೆ ಮಾರಾಟ ಮಾಡುತ್ತಿದ್ದಾರೆ. ಇದರಿಂದ ಸ್ಥಳಿಯ ಇತರೆ ರೈತರಿಗೆ ಹಸುಗಳಿಗೆ ಮೇವು ಖರೀದಿಸಲು ಸಾಧ್ಯವಾಗುತ್ತಿಲ್ಲ.

ಇತ್ತೀಚೆಗೆ ಕಳೆದೊಂದು ವಾರದಿಂದ ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಮತ್ತು ಸಮೀಪದ ಗ್ರಾಮಗಳಿಂದಲೂ ಭತ್ತದ ಹುಲ್ಲನ್ನು ತಮಿಳುನಾಡಿನ ಕಡೆಯ ದಲ್ಲಾಳಿಗಳು ಖರೀದಿ ಮಾಡುತ್ತಿರುವುದು ಕಂಡುಬರುತ್ತಿದೆ.

ಇದರಿಂದಾಗಿ ಹಸುಗಳನ್ನು ಸಾಕುತ್ತಿರುವ ಇತರ ರೈತರಿಗೆ ಭತ್ತದ ಹುಲ್ಲುಗಳು ಸಿಗುತ್ತಿಲ್ಲ.ಸಮೀಪದ ಕರ್ನಾಟಕದ ಗಡಿಭಾಗದಿಂದಲೇ ಹುಲ್ಲು ತುಂಬಿದ ಲಾರಿಗಳು ಚೆಕ್ ಪೋಸ್ಟ್ ಮೂಲಕವೇ ಹೋಗುತ್ತಿದ್ದರೂ ಸಹ, ಪೋಲಿಸ್ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಮೌನವಹಿಸಿರುವುದು ಹಲವು ಪ್ರಶ್ನೆಗಳನ್ನು ಹುಟ್ಡುಹಾಕಿದೆ.

ಕೊಳ್ಳೇಗಾಲ ತಾಲ್ಲೂಕು ಆಡಳಿತ, ಹನೂರು ತಾಲ್ಲೂಕು ಆಡಳಿತ ಮತ್ತು ಚಾಮರಾಜನಗರ ಜಿಲ್ಲಾ ಆಡಳಿತ ತಕ್ಷಣ ಎಚ್ಚೆತ್ತು ಕೊಂಡು ತಮಿಳುನಾಡಿನ ಕಡೆಗೆ ಅಕ್ರಮವಾಗಿ ಸಾಗಾಣೆ ಆಗುತ್ತಿರುವ ಹಸುವಿನ ಮೇವನ್ನು ತಡೆಹಿಡಿಯ ಬೇಕೆಂದು ಹಲವಾರು ರೈತರು ಒತ್ತಾಯಿಸಿದ್ದಾರೆ.

  • ನಿಂಪುವಾರ್ತೆ

Releated Posts

ಕೊಳ್ಳೇಗಾಲ ಭೀಮನಗರದ ಮೈಸೂರಿನಲ್ಲಿ ಇರುವ ಗುಪ್ತಚರ ಎಎಸ್ಐ ಶಿವಕುಮಾರ್ ಗೆ ಮುಖ್ಯಮಂತ್ರಿ ಗಳ ಚಿನ್ನದ ಪದಕ

ಕೊಳ್ಳೇಗಾಲ/ ಮೈಸೂರು : ಕೊಳ್ಳೇಗಾಲ ಪಟ್ಟಣದ ಭೀಮನಗರದ ನಿವಾಸಿ ಹಾಲಿ ಮೈಸೂರಿನಲ್ಲಿ ಪೋಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಎಸ್.ಶಿವಕುಮಾರ್ ಅವರು ಮುಖ್ಯಮಂತ್ರಿ ಗಳ ಪದಕ…

ByByN Rajesh Apr 3, 2026

ಕೊಳ್ಳೇಗಾಲ : ಮಹಿಳಾ ಸಬಲೀಕರಣದಿಂದ ಕುಟುಂಬದ ಅಭಿವೃದ್ಧಿ – ಶಾಸಕ ಎ.ಆರ್. ಕೃಷ್ಣಮೂರ್ತಿ

ಕೊಳ್ಳೇಗಾಲ. ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಇಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಯೋಜಿಸಿದ್ದರು. ಪಟ್ಟಣದ ವೆಂಕಟೇಶ್ವರ ಮಹಲ್ ನಲ್ಲಿ ಇಂದು…

ByByN Rajesh Apr 1, 2026

ನಿವೃತ್ತಿಯಾದ ಸೆಸ್ಕಾಂ ಎಇಇ ಎಂ ರಾಜು ಅವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

ನಿವೃತ್ತಿಯಾದ ಸೆಸ್ಕ್ ಎಇಇ ಎಂ.ರಾಜುಗೆ ಹೃದಯ ಸ್ಪರ್ಶಿ ಬೀಳ್ಕೊಡುಗೆ ಕೊಳ್ಳೇಗಾಲ : ಸೇವೆಯಿಂದ ನಿವೃತ್ತಿ ಹೊಂದಿದ ಕೊಳ್ಳೇಗಾಲ ಸೆಸ್ಕಾಂ ಉಪವಿಭಾಗದ ಎಇಇ ಎಂ.ರಾಜು ಅವರಿಗೆ…

ByByN Rajesh Mar 31, 2026

Leave a Reply

Your email address will not be published. Required fields are marked *

Scroll to Top