/* Change button hover color to red */
button:hover,
.wp-block-button__link:hover,
input[type="submit"]:hover {
    background-color: red !important;
    color: #fff !important; /* Makes text white for contrast */
}

  • Home
  • ಜಿಲ್ಲೆ
  • ಕೊಳ್ಳೇಗಾಲ ತಾಲ್ಲೂಕಿನ ದೊಡ್ಡಿಂದುವಾಡಿ – ಕನಕಗಿರಿ ರಸ್ತೆ ಅಭಿವೃದ್ಧಿಗೆ ರೈತ ಸಂಘ ಒತ್ತಾಯ
Image

ಕೊಳ್ಳೇಗಾಲ ತಾಲ್ಲೂಕಿನ ದೊಡ್ಡಿಂದುವಾಡಿ – ಕನಕಗಿರಿ ರಸ್ತೆ ಅಭಿವೃದ್ಧಿಗೆ ರೈತ ಸಂಘ ಒತ್ತಾಯ

ಕೊಳ್ಳೇಗಾಲ. ದೊಡ್ಡಿಂದುವಾಡಿ ಗ್ರಾಮದ ಕನಕಗಿರಿ ರಸ್ತೆ ಅಭಿವೃದ್ಧಿ ಪಡಿಸದೇ ನಿರ್ಲಕ್ಷ್ಯ ವಹಿಸಿರುವ ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ಮೇಲೆ ಕ್ರಮ ಜರುಗಿಸುವಂತೆ ಒತ್ತಾಯಿಸಿ ಶುಕ್ರವಾರ ಇಲ್ಲಿನ ರೈತ ಸಂಘದವರು ಪ್ರತಿಭಟನೆ ನಡೆಸಿದರು.

ಪಟ್ಟಣದ ಲೋಕೋಪಯೋಗಿ ಇಲಾಖೆಯ ಮುಂಭಾಗದಲ್ಲಿ ಜಮಾಯಿಸಿದ್ದ ರೈತರು ಧಿಕ್ಕಾರ ಕೂಗುವ ಮೂಲಕ ಪ್ರತಿಭಟಿಸಿದರು.

ಕನಕಗಿರಿ ರಸ್ತೆ ಅಭಿವೃದ್ಧಿ ಪಡಿಸುವಂತೆ ಕಳೆದ ನವೆಂಬರ್ ನಲ್ಲಿ ಪ್ರತಿಭಟನೆ ನಡೆಸಿದ್ದಾಗ ಒಂದು ತಿಂಗಳೊಳಗೆ ಅಭಿವೃದ್ಧಿ ಪಡಿಸುವುದಾಗಿ ಹೇಳಿ ಹೋದ ಅಧಿಕಾರಿಗಳು ಇದುವರೆಗೂ ಕಾಮಗಾರಿ ನಡೆಸದೇ ಇರುವುದ್ದರಿಂದ ಆ ರಸ್ತೆಯಲ್ಲಿ ಇಂದು ಬೆಳಿಗ್ಗೆ ಬೈಕ್ ನಲ್ಲಿ ತೆರಳುತ್ತಿದ್ದ ರೈತ ರಾಜಣ್ಣರವರಿಗೆ ಎದುರಗಡೆ ಹೋಗುತ್ತಿದ್ದ ವಾಹನದ ಟೈರ್ ಸಿಕ್ಕ ಕಲ್ಲು ಹಾರಿ ತೀವ್ರವಾಗಿ ಗಾಯಗೊಂಡಿದ್ದ ಹಿನ್ನೆಲೆ ರಸ್ತೆಯನ್ನು ಅಭಿವೃದ್ಧಿ ಪಡಿಸುವಲ್ಲಿ ವಿಫಲವಾಗಿರುವ ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಅಮಾನತ್ತು ಪಡಿಸಬೇಕು. ಜೊತೆಗೆ ಸಂಬಂಧಪಟ್ಟ ಗುತ್ತಿಗೆದಾರರನ್ನು ಬ್ಲಾಕ್ ಪಟ್ಟಿಯಲ್ಲಿಡಬೇಕು ಎಂದು ಒತ್ತಾಯಿಸಿ ಪ್ರತಿಭಟಿಸಿ, ಅಧೀಕ್ಷಕ ಅಭಿಯಂತರರು ರವರ ವಿಳಾಸದ ಮನವಿಪತ್ರವನ್ನು ಲೋಕೋಪಯೋಗಿ ಇಲಾಖೆಯ ಎಇಇ ಪುರುಷೋತ್ತಮ್ ರವರ ಮೂಲಕ ಮನವಿ ಸಲ್ಲಿಸಿದರು.
ಬಳಿಕ ಪುರುಷೋತ್ತಮ್ ಮಾತನಾಡಿ, ಕನಕಗಿರಿ ರಸ್ತೆಯ ಕಾಮಗಾರಿಯನ್ನು ಸೋಮವಾರದಿಂದ ನಡೆಸುವಂತೆ ಗುತ್ತಿಗೆದಾರರಿಗೆ ತಾಕೀತು ಮಾಡಿರುವುದಾಗಿ ಹೇಳಿದ್ದರಿಂದ ಪ್ರತಿಭಟನೆಯನ್ಮು ಕೈಬಿಡುವಂತೆ ಕೇಳಿದಾಗ ಪ್ರತಿಭಟನೆ ಕೈಬಿಟ್ಟು ವಾಪಸ್ಸು ತೆರಳಿದರು.
ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಶೈಲೇಂದ್ರ, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಪೆರಿಯಾನಾಯಗಂ, ದೊಡ್ಡಿಂದುವಾಡಿ ಗ್ರಾಮ ಘಟಕ ಅಧ್ಯಕ್ಷ ವಸಂತಕುಮಾರ್, ಸಿಂಗನಲ್ಲೂರು ಗ್ರಾಮ ಘಟಕ ಬೆಟ್ಟೇಗೌಡ, ಬಸವಲಿಂಗಶೆಟ್ಟಿ, ರಂಗಸ್ವಾಮಿ, ಮೋಳೆ ರಾಜು, ಗೋವಿಂದರಾಜು, ನಾಗೇಂದ್ರ, ವೆಂಕಟೇಶ್, ಕೃಷ್ಣಶೆಟ್ಟಿ, ರವಿ, ಕೀರ್ತಿ, ನಾಗೇಂದ್ರ, ಕೀರ್ತಿರಾಜ್ ಹಾಗೂ ಇತರರು ಇದ್ದರು.

Releated Posts

ಕೊಳ್ಳೇಗಾಲ ಭೀಮನಗರದ ಮೈಸೂರಿನಲ್ಲಿ ಇರುವ ಗುಪ್ತಚರ ಎಎಸ್ಐ ಶಿವಕುಮಾರ್ ಗೆ ಮುಖ್ಯಮಂತ್ರಿ ಗಳ ಚಿನ್ನದ ಪದಕ

ಕೊಳ್ಳೇಗಾಲ/ ಮೈಸೂರು : ಕೊಳ್ಳೇಗಾಲ ಪಟ್ಟಣದ ಭೀಮನಗರದ ನಿವಾಸಿ ಹಾಲಿ ಮೈಸೂರಿನಲ್ಲಿ ಪೋಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಎಸ್.ಶಿವಕುಮಾರ್ ಅವರು ಮುಖ್ಯಮಂತ್ರಿ ಗಳ ಪದಕ…

ByByN Rajesh Apr 3, 2026

ಕೊಳ್ಳೇಗಾಲ : ಮಹಿಳಾ ಸಬಲೀಕರಣದಿಂದ ಕುಟುಂಬದ ಅಭಿವೃದ್ಧಿ – ಶಾಸಕ ಎ.ಆರ್. ಕೃಷ್ಣಮೂರ್ತಿ

ಕೊಳ್ಳೇಗಾಲ. ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಇಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಯೋಜಿಸಿದ್ದರು. ಪಟ್ಟಣದ ವೆಂಕಟೇಶ್ವರ ಮಹಲ್ ನಲ್ಲಿ ಇಂದು…

ByByN Rajesh Apr 1, 2026

ನಿವೃತ್ತಿಯಾದ ಸೆಸ್ಕಾಂ ಎಇಇ ಎಂ ರಾಜು ಅವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

ನಿವೃತ್ತಿಯಾದ ಸೆಸ್ಕ್ ಎಇಇ ಎಂ.ರಾಜುಗೆ ಹೃದಯ ಸ್ಪರ್ಶಿ ಬೀಳ್ಕೊಡುಗೆ ಕೊಳ್ಳೇಗಾಲ : ಸೇವೆಯಿಂದ ನಿವೃತ್ತಿ ಹೊಂದಿದ ಕೊಳ್ಳೇಗಾಲ ಸೆಸ್ಕಾಂ ಉಪವಿಭಾಗದ ಎಇಇ ಎಂ.ರಾಜು ಅವರಿಗೆ…

ByByN Rajesh Mar 31, 2026

Leave a Reply

Your email address will not be published. Required fields are marked *

Scroll to Top