
ಕೊಳ್ಳೇಗಾಲ/ ಮೈಸೂರು : ಕೊಳ್ಳೇಗಾಲ ಪಟ್ಟಣದ ಭೀಮನಗರದ ನಿವಾಸಿ ಹಾಲಿ ಮೈಸೂರಿನಲ್ಲಿ ಪೋಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಎಸ್.ಶಿವಕುಮಾರ್ ಅವರು ಮುಖ್ಯಮಂತ್ರಿ ಗಳ ಪದಕ ಕ್ಕೆ ಭಾಜನರಾಗಿದ್ದಾರೆ.
ಇಂದು ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಎ.ಎಸ್.ಐ ಹುದ್ದೆಯಲ್ಲಿ ಇರುವ ಎಸ್.ಶಿವಕುಮಾರ್ ಅವರು ಮುಖ್ಯಮಂತ್ರಗಳಿಂದ ಪದಕ ಸ್ವೀಕರಿಸಿದರು.
ಶಿವಕುಮಾರ್ ಅವರ ಮೈಸೂರಿನ ನಗರ ಕಮೀಷನರ್ ಕಚೇರಿಯಲ್ಲಿ ಗುಪ್ತಚರ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
ಕಳೆದ 25 ವರ್ಷಗಳಿಂದ ಗುಪ್ತಚರ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ಇವರ ಸೇವೆ ಗುರುತಿಸಿ ಮುಖ್ಯಮಂತ್ರಿ ಗಳ ಚಿನ್ನದ ಪದಕಕ್ಕೆ ಶಿಫಾರಸ್ಸು ಮಾಡಲಾಗಿತ್ತು.
ಶಿವಕುಮಾರ್ ಅವರು ಮೂಲತಃ ಕೊಳ್ಳೇಗಾಲ ಪಟ್ಟಣದ ಭೀಮನಗರದ ನಿವಾಸಿ ಆಗಿದ್ದಾರೆ. ಇವರಿಗೆ ಮುಖ್ಯಮಂತ್ರಿ ಗಳ ಪದಕ ದೊರೆತ ಹಿನ್ನೆಲೆಯಲ್ಲಿ ಭೀಮನಗರದ ಜನರು ಸಂತೋಷ ವ್ಯಕ್ತಪಡಿಸಿದ್ದಾರೆ.
![/* Change button hover color to red */
button:hover,
.wp-block-button__link:hover,
input[type="submit"]:hover {
background-color: red !important;
color: #fff !important; /* Makes text white for contrast */
}](https://old.rapower28.com/wp-content/uploads/2025/08/WhatsApp-Image-2025-08-23-at-7.28.55-AM-2-1024x454.jpeg)












